ಪುಟಾಣಿ ಪಾರ್ಟಿ ಮತ್ತು ನಾನು

-ಜಯಲಕ್ಷ್ಮಿ ಪಾಟೀಲ್

‘Children’s film society’ ನಿರ್ಮಾಣದ ‘ಪುಟಾಣಿ ಪಾರ್ಟಿ’ ನಾನುಅಭಿನಯಿಸಿದ ಎರಡನೆಯ ಕಲಾತ್ಮಕ ಮತ್ತು ಮೊದಲ ಮಕ್ಕಳ ಚಲನಚಿತ್ರ. ಈಚಿತ್ರದ ನಿರ್ದೇಶಕರು ರಾಮಚಂದ್ರ ಪಿ ಎನ್. ತುಂಬಾ ಸಹನಶೀಲ ಮತ್ತುಸಮರ್ಥ ನಿರ್ದೇಶಕರು. ಈ ಚಿತ್ರದಲ್ಲಿ ಅಭಿನಯಿಸಿದ ಬಹುತೇಕ ಜನರುಯಾವತ್ತೂ ಕ್ಯಾಮರಾದ ಮುಂದೆ ನಿಂತು ಅಭಿನಯಿಸಿದವರಲ್ಲ, ಅಂಥವರಿಂದನಾನೀಗ ನಿಮಗೆ ಹೇಳಿರುವುದು ಸುಳ್ಳು ಎನ್ನುವಷ್ಟು ಸಹಜಾಭಿನಯವನ್ನುಹೊರಹೊಮ್ಮಿಸಿದ ವ್ಯಕ್ತಿ ಅವರು.

ಮಕ್ಕಳಂತೂ ಎಷ್ಟು ಲೀಲಾಜಾಲವಾಗಿ ಮತ್ತುತನ್ಮಯತೆಯಿಂದ ಅಭಿನಯಿಸಿದ್ದಾರೆಂದರೆ ಆಹಾ ಅದ್ಭುತ! ಆ ಎಲ್ಲ ಮಕ್ಕಳು ೫ನೆತರಗತಿಯಿಂದ ೧೦ನೆ ತರಗತಿಯಲ್ಲಿ ಓದುತ್ತಿರುವವರು. ಮೊದಲು ಅವರಿಗೆ ಚಿತ್ರಕತೆಯನ್ನು ಮತ್ತು ಅವರವರ ಪಾತ್ರಗಳನ್ನು ವಿವರಿಸಿ,ಮೂರು ದಿನ ಸತತವಾಗಿಮಕ್ಕಳಿಗೆ ಹೇಗೆ ಅಭಿನಯಿಸಬೇಕು ಮತ್ತು ಯಾಕೆ ಹಾಗೆ ಅಭಿನಯಿಸಬೇಕುಅನ್ನುವುದನ್ನು ಹೇಳಿಕೊಟ್ಟು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ತುಂಬಿ ಅವರನ್ನುಎಷ್ಟು ಚೆನ್ನಾಗಿ ರಾಮ್ ಸರ್ ತಯಾರು ಮಾಡಿದ್ದರೆಂದರೆ ಕ್ಯಾಮೆರಾದಪರಿಚಯವಿದ್ದ ನಾನು ಮತ್ತು ಭವಾನಿ ಕೆಲವೊಮ್ಮೆ ಗೊಂದಲಗೊಳ್ಳುತ್ತಿದ್ದೆವಾದರೂಈ ಮಕ್ಕಳು ಮಾತ್ರ ಅಂಗಳದಲ್ಲಿ ಲಗೋರಿ ಆಡಿದಷ್ಟೇ ಸಹಜವಾಗಿಅಭಿನಯಿಸಿಬಿಡುತ್ತಿದ್ದರು!!

ರಂಜಿತಾ ಜಾಧವ್, ಶರತ್,ಗುರುದತ್ತ,ಪವನ,ದೀಪಕ್,ಮಮತಾ,ಮನೋಜ್ ಮುಂತಾದ ಮಕ್ಕಳನ್ನು ಮೊದಲ ಸಲ ನೋಡಿದಾಗಅವರುಗಳ ಖದರು ಕಂಡು “ಇದೇನಪ್ಪಾ ಈ ಮಕ್ಕಳ ಜೊತೆ ನಾನು ೮-೧೦ ದಿನಕಳೆಯಬಲ್ಲೇನಾ?!” ಅನಿಸಿತ್ತು. ಆದರೆ ದಿನ ಕಳೆದಂತೆಲ್ಲ ಈ ಮಕ್ಕಳು ಎಷ್ಟುಹತ್ತಿರದವರಾದರೆಂದರೆ ಇತ್ತೀಚೆಗೆ ನಾನು ಡಬ್ಬಿಂಗ್ಗಿಗೆ ಅಂತ ಧಾರವಾಡಕ್ಕೆಹೋದಾಗ ಎಲ್ಲರೂ ಸಂಜೆ ಬಂದು ನನ್ನೊಡನೆ ಎರಡು ಗಂಟೆಗಳ ಕಾಲ ಹರಟೆಹೊಡೆಯುತ್ತಾ ಕುಳಿತರು.ನಾನೇ “ಹೊತ್ತಾಗುತ್ತೆ ಹೋಗ್ರೋ ಇನ್ನ ಮನೆಗೆ” ಅಂತಬಲವಂತ ಮಾಡಿ ಕಳಿಸಬೇಕಾಯಿತು(ಆಗ ಅವರಿಗೆಲ್ಲ ಪರೀಕ್ಷೆಯ ಸಮಯಬೇರೆ!!)

ರಂಜಿತಾ ಧಾರವಾಡದ ಒಂದು ಅಪ್ಪಟ ಪ್ರತಿಭೆ. ಈ ಹುಡುಗಿಗೆ ಎಂಥಾಆತ್ಮವಿಶ್ವಾಸ ಮತ್ತು ಅಭಿನಯದ ತುಡಿತವೆಂದರೆ ಇಡೀ ಯುನಿಟ್ಟೆ ( ಚಿತ್ರ ತಂಡ )ಬೆರಗಾಗುತ್ತಿತ್ತು ಈಕೆ ಅಭಿನಯಿಸುವಾಗ. ರಂಜಿತಾ ಈ ಚಿತ್ರದಲ್ಲಿ ನನ್ನ ಮಗಳಪಾತ್ರ(ಗೀತಾ) ನಿರ್ವಹಿಸಿದ್ದಾಳೆ. ಒಂದು ಶಾಟ್.. ರಂಜಿತಾ ಸಭಿಕರೆದುರು ನಿಂತುಊರಲ್ಲಿಯ ಅನಾನುಕೂಲತೆಗಳಿಂದಾಗಿ ಮಕ್ಕಳಿಗಾಗುತ್ತಿರುವ ತೊಂದರೆಗಳನ್ನುವಿವರಿಸುತ್ತಿರುತ್ತಾಳೆ. ಮೈಲುದ್ದದ ಸಂಭಾಷಣೆ ಅದು.ಸರಾಗವಾಗಿ,ಭಾವಪೂರ್ಣತೆಯಿಂದ ಎಂಥಾ ಅದ್ಭುತವಾಗಿ ಅಭಿನಯಿಸುತ್ತಿದ್ದಾಳೆಎಂದು ನಾವೆಲ್ಲ ಬಿಟ್ಟ ಕಣ್ಣಿಂದ ನೋಡುತ್ತಿರುವಾಗಲೇ ” ಕಟ್” ಅನ್ನುವ ರಾಮ್ಸರ್ ಅವರ ಸಿಟ್ಟಿನ ಧ್ವನಿ ಕೇಳಿ ಬೆಚ್ಚಿಬಿದ್ದೆವು! ಅಲ್ಲಿವರೆಗೂ ರಾಮ್ ಸರ್ಸಿಟ್ಟಲ್ಲಿದ್ದುದನ್ನ ನಾನು ಕಂಡೆ ಇರಲಿಲ್ಲ.. ಅವರ ಆ ಕೋಪಕ್ಕೆ ಕಾರಣ ಅಷ್ಟುಅದ್ಭುತವಾಗಿ ಅಭಿನಯಿಸುತ್ತಿದ್ದ ರಂಜಿತಾಳ ಬಗಲಲ್ಲಿ ಇರಬೇಕಾದ ಚೀಲವೊಂದುಸಹಾಯಕ ನಿರ್ದೇಶಕರ ಮರೆವಿನಿಂದಾಗಿ ಮಿಸ್ ಆದುದು. ಮತ್ತೆ ಆ ಮಗುಅಷ್ಟುದ್ದದ ಡೈಲಾಗ್ ಅನ್ನು ಅಷ್ಟೆ ತನ್ಮಯತೆಯಿಂದ ಹೇಳಬಲ್ಲುದಾ? ಅನ್ನುವಆತಂಕ ಆ ಸಿಟ್ಟಿಗೆ ಕಾರಣ . ಆದರೆ ರಂಜಿತಾ ಮೊದಲಿನಷ್ಟೇ ತನ್ಮಯತೆಯಿಂದಮತ್ತೆ ಅಭಿನಯಿಸಿದಳು!

ಏಳನೇ ಕ್ಲಾಸ್ನಲ್ಲಿ ಓದುತ್ತಿರುವ ಶರತ್ ಒಳ್ಳೆ ನುರಿತ ನಟನೇನೋ ಎನ್ನುವಷ್ಟುಆತ್ಮವಿಶ್ವಾಸದಿಂದ ಅಭಿನಯಿಸಿದ ಹುಡುಗ. ಗುರುದತ್ತ, ಪವನ, ದೀಪಕ್,ಮನೋಜ್ ಮತ್ತು ಮಮತಾ ಕೂಡಾ ಅಷ್ಟೆ , ಒಳ್ಳೆಯ ನಟರು, ವಿನಯವನ್ನುಮೈಗೂಡಿಸಿಕೊಂಡ ಮಕ್ಕಳು.

ಈ ಚಲನಚಿತ್ರ ಕನ್ನಡದ್ದಾದರೂ ನಟವರ್ಗ ಮತ್ತು ನಿರ್ದೇಶಕರನ್ನುಹೊರತುಪಡಿಸಿ ಚಿತ್ರ ತಂಡದ ಉಳಿದೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದಬಂದವರು ಎನ್ನುವುದು ವಿಶೇಷತೆ. ೧೮ ದಿನಗಳ ಕಾಲ ಧಾರವಾಡದಲ್ಲಿ ಮಿನಿಭಾರತ ನೆಲೆಯೂರಿತ್ತು!! 🙂

ನಿಮ್ಮ ಟಿಪ್ಪಣಿ ಬರೆಯಿರಿ